
ಪ್ರಜಾವಾಣಿ ವಾರ್ತೆಹೊಸಪೇಟೆ: ಸರ್ಕಾರದ ಮಹತ್ವಾಕಾಂಕ್ಷಿ ಯಶಸ್ವಿನಿ ರಕ್ಷಣಾ ಯೋಜನೆ ಮರು ಜಾರಿಯಾಗಿದ್ದು, ಹೊಸ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನೋಂದಣಿಗೆ ಮಾರ್ಚ್ 31 ಕೊನೆಯ ದಿನ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ಸಹಕಾರಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯ, ಜನತಾ ಬಜಾರ್ ಕಟ್ಟಡ, ರೈಲ್ವೆ ಸ್ಟೇಷನ್ ರಸ್ತೆ, ಬಳ್ಳಾರಿ, ದೂ. 08392272635 ಮತ್ತು ತಾಲ್ಲೂಕುವಾರು ಸಹಾಯಕ ಅಭಿವೃದ್ಧಿ ಅಧಿಕಾರಿಗಳ ದೂ. ಹೊಸಪೇಟೆ: 7899680566, ಹಗರಿಬೊಮ್ಮನಹಳ್ಳಿ: 8970505806, ಕೂಡ್ಲಿಗಿ: 8618878795, ಹರಪನಹಳ್ಳಿ: 9449984818, ಹೂವಿನಹಡಗಲಿ: 8618878795, ಕೊಟ್ಟೂರು: 9449130532, ಗೆ ಸಂಪರ್ಕಿಸಬಹುದು ಎಂದು ಸಹಕಾರಿ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.