ADVERTISEMENT

IPS Transfers: ವಿಜಯನಗರ ಜಿಲ್ಲೆಯ ನೂತನ ಎಸ್‌ಪಿ ಆಗಿ ಜಾಹ್ನವಿ ನೇಮಕ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 6:30 IST
Last Updated 15 ಜುಲೈ 2025, 6:30 IST
<div class="paragraphs"><p>ಜಾಹ್ನವಿ ಎಸ್‌.</p></div>

ಜಾಹ್ನವಿ ಎಸ್‌.

   

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಜಾಹ್ನವಿ ಎಸ್‌. ಅವರು ನಿಯುಕ್ತಿಗೊಂಡಿದ್ದಾರೆ. ಕಳೆದ 2.8 ವರ್ಷದಿಂದ ಜಿಲ್ಲೆಯ ಎಸ್‌ಪಿ ಆಗಿದ್ದ ಶ್ರೀಹರಿಬಾಬು ಬಿ.ಎಲ್‌. ಅವರು ಬೆಂಗಳೂರಿಗೆ ಸಿಸಿಬಿ ಡಿಸಿಪಿ ಆಗಿ ವರ್ಗಾವಣೆಗೊಂಡಿದ್ದಾರೆ.

ಈ ಹಿಂದೆ ಮೈಸೂರಿನಲ್ಲಿ ಡಿಸಿಪಿ ಆಗಿದ್ದ ಜಾಹ್ನವಿ ಅವರು ಸದ್ಯ ನಿಯೋಜನೆಯ ನಿರೀಕ್ಷೆಯಲ್ಲಿದ್ದರು. ಅವರು 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.