ಹೊಸಪೇಟೆ (ವಿಜಯನಗರ): ಕೆ.ಎಂ. ಗಾಯತ್ರಿ ಅವರನ್ನು ನೂತನ ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಗಾಯತ್ರಿ ಅವರು ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕಿಯಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ವಿಜಯನಗರ ಜಿಲ್ಲೆಗೆ ನೇಮಕ ಮಾಡಲಾಗಿದೆ.
ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭ ಅ. 2ರಂದು ನಡೆಯಲಿದೆ. ಅದಕ್ಕೂ ಒಂದು ದಿನ ಮುಂಚಿತವಾಗಿ ಅವರ ನೇಮಕ ನಡೆದಿದೆ. ಶುಕ್ರವಾರ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಪಿ. ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಅವರನ್ನು ಸರ್ಕಾರ ನೇಮಿಸಿತ್ತು. ಇದರೊಂದಿಗೆ ಹೊಸ ಜಿಲ್ಲೆಯ ಮೂರು ಪ್ರಮುಖ ಹುದ್ದೆಗಳಿಗೆ ಅಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.