ಹೊಸಪೇಟೆ: ರಸ್ತೆ ಅಪಘಾತದಲ್ಲಿ ಕಬಡ್ಡಿ ಆಟಗಾರ ಮೃತಪಟ್ಟಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಾಲ್ಲೂಕಿನ ಚಿಲಕನಹಟ್ಟಿಯ ಸತೀಶ್ (22) ಮೃತ ಆಟಗಾರ.
ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ವಿಜಯನಗರ ಕಬಡ್ಡಿ ಲೀಗ್ನಲ್ಲಿ ಭಾಗವಹಿಸಿದ ನಂತರ ಭಾನುವಾರ ರಾತ್ರಿ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಇನ್ನೊಂದು ಬೈಕಿನೊಂದಿಗೆ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಸತೀಶ್ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಅವರಿಗೆ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.