ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ಕಡಾಕೋಳ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮಂಗಳವಾರ ಕರಡಿ ಬಿದ್ದಿದೆ.
ಚಿಕ್ಕಜೋಗಿಹಳ್ಳಿ, ಕಡಾಕೋಳ, ಮಡ್ಲಾನಾಯಕನಹಳ್ಳಿ, ಭೀಮಸಮುದ್ರ, ಕುರಿಹಟ್ಟಿ ಭಾಗಗಳಲ್ಲಿ ಕರಡಿ ಕಾಣಿಸಿಕೊಂಡಿತ್ತು.
ಚಿಕ್ಕಜೋಗಿಹಳ್ಳಿಯ ಪೆಟ್ರೋಲ್ ಬಂಕ್, ಲಕ್ಮಣ್ ನಾಯಕ್ ಎಂಬುವರ ತೋಟದ ಬಳಿ ರಾತ್ರಿ ವೇಳೆ ಕರಡಿ ಓಡಾಡಿರುವ ವಿಡಿಯೊ ವೈರಲ್ ಆಗಿದ್ದವು. ಕೆಲವೆಡೆ ಹಗಲಲ್ಲಿಯೇ ಕರಡಿ ಕಾಣಿಸಿಕೊಂಡಿದ್ದರಿಂದ ರೈತರು ಆತಂಕಕ್ಕೆ ಒಳಗಾಗಿದ್ದರು.
ಬೋನಿಗೆ ಬಿದ್ದಿರುವ ಕರಡಿಯನ್ನು ಗುಡೇಕೋಟೆ ಕರಡಿಧಾಮಕ್ಕೆ ಸಾಗಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.