ADVERTISEMENT

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನರ ಒಲವಿನ ಬಗ್ಗೆ ಸರ್ವೇ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 8:32 IST
Last Updated 13 ಅಕ್ಟೋಬರ್ 2022, 8:32 IST
ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು.
ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು.   

ಹೂವಿನಹಡಗಲಿ (ವಿಜಯನಗರ): ರಾಜ್ಯದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಸ್ಥಿತಿಗತಿ ಹಾಗೂ ಯಾರ ಪರ ಜನರ ಒಲವು ಇದೆ ಎನ್ನುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸರ್ವೇ ನಡೆಸುತ್ತಿದ್ದಾರೆ‌ ಎಂದು ಮಾಜಿ ಮುಖ್ಯಮಂತ್ರಿಯೂ ಆದ ಶಾಸಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ಜಿ.ಬಿ.ಆರ್. ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಅದೇ ರೀತಿ ರಾಜ್ಯದಲ್ಲೂ ರಾಜ್ಯ ಸರ್ಕಾರ‌ ಸರ್ವೇ ನಡೆಸುತ್ತಿದೆ. ಪಕ್ಷದ ಮುಖಂಡರ ಕೆಲಸ ನೋಡಿಕೊಂಡು ಟಿಕೆಟ್ ನೀಡಲಾಗುವುದು. ಅವರ ಗೆಲುವಿಗೆ ಎಲ್ಲ ಕಾರ್ಯಕರ್ತರು ಶ್ರಮಿಸಬೇಕೆಂದು‌ ಸೂಚಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ‌ ಎನ್ನುವುದು ತಿರುಕನ ಕನಸು. ದೇಶದಲ್ಲಿ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಉಳಿದ ಕಡೆ ಅಡ್ರೆಸ್ ಇಲ್ಲ. ಕರ್ನಾಟಕ ದಲ್ಲಿ ಅಡ್ರೆಸ್ ಹುಡುಕಲು ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿದ್ದಾರೆ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.