ವಿಜಯನಗರ (ಹೊಸಪೇಟೆ): ಇಲ್ಲಿನ ವಿಜಯನಗರ ಕಾಲೇಜಿನ ಹಿರಿಯ ಪ್ರಾಧ್ಯಾಪಕ, ಸಾಹಿತಿ ಮೃತ್ಯುಂಜಯ ರುಮಾಲೆ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ‘ಸಾಹಿತ್ಯಶ್ರೀ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು 2020ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದು, ಪ್ರಮಾಣ ಪತ್ರ ಒಳಗೊಂಡಿದೆ. ರುಮಾಲೆ ಅವರು ಪ್ರಾಧ್ಯಾಪಕರಾಗಿದ್ದು, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತ ಬಂದಿದ್ದಾರೆ. ಅನೇಕ ಕೃತಿಗಳನ್ನು ಬರೆದಿದ್ದಾರೆ.
ಇದನ್ನೂ ಓದಿ:ಕರ್ನಾಟಕ ಸಾಹಿತ್ಯ ಅಕಾಡೆಮಿ: ಪ್ರೊ.ಅಮೃತ ಸೋಮೇಶ್ವರ ಸೇರಿ ಐವರಿಗೆ ಗೌರವ ಪ್ರಶಸ್ತಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.