ಹೊಸಪೇಟೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಮಲಾಪುರ ಪ್ರಾದೇಶಿಕ ಕೇಂದ್ರದಿಂದ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಸ್ಥಳದಲ್ಲಿಯೇ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲೆಯ ಪ್ರಾದೇಶಿಕ ನಿರ್ದೇಶಕ ಪ್ರಶಾಂತ್ ಎಂ. ತಿಳಿಸಿದ್ದಾರೆ.
ಸಾಂಪ್ರದಾಯಿಕವಾಗಿ ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತು, ಸರ್ಕಾರಿ, ಅರೆಸರ್ಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ದೂರಶಿಕ್ಷಣ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ಈ ಭಾಗದ ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನದೇ ಆದ ಪ್ರಾದೇಶಿಕ ಕೇಂದ್ರವನ್ನು ನೂತನವಾಗಿ ತಾಲ್ಲೂಕಿನ ಕಮಲಾಪುರದಲ್ಲಿ ಪ್ರಾರಂಭಿಸಿದೆ.
ಪ್ರವೇಶಕ್ಕೆ ಮಾರ್ಚ್ 31 ಕೊನೆ ದಿನ. ಮಾಹಿತಿಗಾಗಿ 9945171920, 8310786885, 7353482254 ಸಂಪರ್ಕಿಸಬಹುದು ಅಥವಾ www.ksoumysuru.ac.in ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಲೋಕಾಯುಕ್ತರ ಭೇಟಿ 13ರಿಂದ
ಹೊಸಪೇಟೆ: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಮಾರ್ಚ್13 ರಿಂದ 15 ರವರೆಗೆ ವಿಜಯನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಹೊಸಪೇಟೆ ಘಟಕದ ಲೋಕಾಯುಕ್ತ ಡಿವೈಎಸ್ಪಿ ತಿಳಿಸಿದ್ದಾರೆ.
ಸಹಕಾರಿ ಕಲ್ಯಾಣ ಮಂಟಪದಲ್ಲಿ 13 ಮತ್ತು 15ರಂದು ಬೆಳಿಗ್ಗೆ 10ಯಿಂದ ಸಂಜೆ 5ರವರೆಗೆ ಸಾರ್ವಜನಿಕರಿಂದ ದೂರು ಸ್ವೀಕಾರ ಮತ್ತು ದೂರು ವಿಚಾರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಾರ್ವಜನಿಕರಿಗೆ ಯಾವುದೇ ಸರ್ಕಾರಿ ಅಧಿಕಾರಿ ಅಥವಾ ಸರ್ಕಾರಿ ನೌಕರರಿಂದ ಸಕಾರಣವಿಲ್ಲದೇ ತೊಂದರೆ ಉಂಟಾಗಿದ್ದರೆ ಅಥವಾ ಸರ್ಕಾರಿ ನೌಕರರು ದುರಾಡಳಿತದಲ್ಲಿ ತೊಡಗಿದ್ದರೆ, ಅಂತಹ ದೂರುಗಳನ್ನು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಲೋಕಾಯುಕ್ತರ ಮುಂದೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಿ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.