ADVERTISEMENT

ತುಂಗಭದ್ರಾ ಅಣೆಕಟ್ಟೆಗೆ ಕೈಗಾರಿಕೆ ಭದ್ರತಾ ಪಡೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 16:27 IST
Last Updated 18 ಜೂನ್ 2021, 16:27 IST
ತುಂಗಭದ್ರಾ ಜಲಾಶಯದ ಭದ್ರತೆಗೆ ಕರ್ನಾಟಕ ಕೈಗಾರಿಕೆ ಭದ್ರತಾ ಪಡೆ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಿರುವುದು
ತುಂಗಭದ್ರಾ ಜಲಾಶಯದ ಭದ್ರತೆಗೆ ಕರ್ನಾಟಕ ಕೈಗಾರಿಕೆ ಭದ್ರತಾ ಪಡೆ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಿರುವುದು   

ಹೊಸಪೇಟೆ(ವಿಜಯನಗರ): ಇಲ್ಲಿನ ತುಂಗಭದ್ರಾ ಅಣೆಕಟ್ಟೆಗೆ ಕರ್ನಾಟಕ ‌ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಜಲಾಶಯದ ಪವರ್ ಹೌಸ್, ಮುಖ್ಯದ್ವಾರದ ಬಳಿ ಭದ್ರತಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದ್ದು ಐವರು ಮುಖ್ಯ ಪೇದೆ, ಮೂವರು ಮಹಿಳಾ ಸಿಬ್ಬಂದಿ ಒಳಗೊಂಡಂತೆ ಒಟ್ಟು 23 ಸಿಬ್ಬಂದಿ ಪಾಳಿ ಪ್ರಕಾರ ಕರ್ತವ್ಯ ನಿರ್ವಹಿಸುವರು. ಈ ಹಿಂದೆ ಸಶಸ್ತ್ರ ಪೊಲೀಸ್ ಹಾಗೂ ಸಿವಿಲ್ ಸಿಬ್ಬಂದಿ ಇದ್ದರು.

‘ಜಲಾಶಯಕ್ಕೆ ಹೆಚ್ಚಿನ ಭದ್ರತೆ ಮನಗಂಡು ತುಂಗಭದ್ರಾ ಆಡಳಿತ ಮಂಡಳಿ ಸರ್ಕಾರಕ್ಕೆ ಪತ್ರ ಬರೆದಿತ್ತು. ಅದರ ಅನ್ವಯ ಕೈಗಾರಿಕಾ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಅತ್ಯುತ್ತಮ ತರಬೇತಿ ಪಡೆದ ಶಸ್ತ್ರಸಜ್ಜಿತ ಪಡೆಗಳು ಅಣೆಕಟ್ಟೆಗೆ ಭದ್ರತೆ ಒದಗಿಸುವರು’ ಎಂದು ಟಿ.ಬಿ.ಡ್ಯಾಂ ಸಿಪಿಐ ವಿ. ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.