ADVERTISEMENT

ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಸಂಗನಬಸವ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 3:44 IST
Last Updated 22 ನವೆಂಬರ್ 2021, 3:44 IST
ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಸಂಗನಬಸವ ಸ್ವಾಮೀಜಿ
ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಸಂಗನಬಸವ ಸ್ವಾಮೀಜಿ   

ಹೊಸಪೇಟೆ (ವಿಜಯನಗರ): ಇಲ್ಲಿನ ಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಸಂಗನಬಸವ ಸ್ವಾಮೀಜಿ (83) ಅವರು ಸೋಮವಾರ ನಸುಕಿನ ಜಾವ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯದ ಕಾರಣದಿಂದ ಕಳೆದ‌ ಎರಡು ವರ್ಷಗಳಿಂದ ಸಾರ್ವಜನಿಕ ಸಮಾರಂಭಗಳಿಂದ‌ ದೂರ‌ ಉಳಿದಿದ್ದರು.

ಹಂಪಿ ಹೇಮಕೂಟ, ಬಾದಾಮಿ ಶಿವಯೋಗ ಮಂದಿರ, ಬಳ್ಳಾರಿ ಮತ್ತು ಹಾಲಕೆರೆ ಮಠದ ಅಧ್ಯಕ್ಷರಾಗಿದ್ದರು. ಶಾಖಾ ಮಠದ ಸ್ವಾಮೀಜಿಗಳು ಸಭೆ ಸೇರಿ ಚರ್ಚಿಸಿದ ನಂತರ ಅಂತ್ಯಕ್ರಿಯೆ ಎಲ್ಲಿ? ಯಾವಾಗ? ನಡೆಸಬೇಕು ಎನ್ನುವುದು ಅಂತಿಮವಾಗಲಿದೆ.

ADVERTISEMENT

ಬಾಗಲಕೋಟೆ ಜಿಲ್ಲೆ‌ ಜಮಖಂಡಿ ತಾಲ್ಲೂಕಿನ ಬಿದರಿ, ಸ್ವಾಮೀಜಿ‌ ಹುಟ್ಟೂರು. ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿ ಬಣದ ನೇತೃತ್ವ ಸ್ವಾಮೀಜಿ‌ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.