ADVERTISEMENT

ಕೋವಿಡ್‌ ನಿಯಮ ಉಲ್ಲಂಘಿಸಿ ಕೃಷ್ಣದೇವರಾಯ ಜಯಂತಿ: ಹತ್ತು ಜನರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 14:50 IST
Last Updated 17 ಜನವರಿ 2022, 14:50 IST
ಕೋವಿಡ್‌ ನಿಯಮ ಉಲ್ಲಂಘಿಸಿ ಕೃಷ್ಣದೇವರಾಯ ಜಯಂತಿ: ಹತ್ತು ಜನರ ವಿರುದ್ಧ ಪ್ರಕರಣ
ಕೋವಿಡ್‌ ನಿಯಮ ಉಲ್ಲಂಘಿಸಿ ಕೃಷ್ಣದೇವರಾಯ ಜಯಂತಿ: ಹತ್ತು ಜನರ ವಿರುದ್ಧ ಪ್ರಕರಣ   

ಹೊಸಪೇಟೆ (ವಿಜಯನಗರ): ಕೋವಿಡ್‌ ನಿಯಮ ಉಲ್ಲಂಘಿಸಿ ಶ್ರೀಕೃಷ್ಣದೇವರಾಯ ಜಯಂತಿ ಆಚರಿಸಿದ ಆರೋಪದ ಮೇರೆಗೆ ಹತ್ತು ಜನರ ವಿರುದ್ಧ ಸೋಮವಾರ ಹಂಪಿ ಪ್ರವಾಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಪುನೀತ್‌ ಕೆರೆಹಳ್ಳಿ, ಗೋಪಿ ಕರಿಯಪ್ಪ, ಅನಂತ ಪದ್ಮನಾಭ, ಅನಿಲ್‌ಕುಮಾರ್‌ ನಾಗರಾಜು, ಚಂದ್ರಕಾಂತ್‌ ಶರಣಪ್ಪ, ಸಚಿನ್‌ ಮಲ್ಲೇಶ್‌, ತುಮಕೂರಿನ ಹರಿನಾಥರೆಡ್ಡಿ ಅಂಜಿನರೆಡ್ಡಿ, ರವಿಕುಮಾರ್‌ ಪ್ರಭಾಕರ್‌, ಶಶಿಕಿರಣ್‌ ಸುಂದರ್‌ಪಾಡ್ಯನ್‌, ತರುಣ ಮಲ್ಲೇಶ್‌ ವಿರುದ್ಧ ಪ್ರಕರಣ ದಾಖಲಾಗಿದೆ.

‘ಕೊರೊನಾ ಸೋಂಕು ಹರಡದಂತೆ ತಡೆಯಲು ಗುಂಪುಗೂಡಿ ಕಾರ್ಯಕ್ರಮ ಆಚರಿಸುವುದರ ಮೇಲೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರೂ ಸೋಮವಾರ ಮಧ್ಯಾಹ್ನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಗುಂಪುಗೂಡಿ ಕೃಷ್ಣದೇವರಾಯನ ಭಾವಚಿತ್ರ ಇಟ್ಟು ಜಯಂತಿ ಆಚರಿಸಿದ್ದಾರೆ. ಅಂತರ ಕಾಯ್ದುಕೊಂಡಿರಲಿಲ್ಲ. ಮುಖಗವಸು ಸೂಕ್ತ ರೀತಿಯಲ್ಲಿ ಧರಿಸದ ಕಾರಣ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದ್ದಾರೆ.

ADVERTISEMENT

ಎಲ್ಲ ಹತ್ತು ಜನ ರಾಷ್ಟ್ರ ರಕ್ಷಣಾ ಪಡೆ, ಬಜರಂಗ ದಳದ ಕಾರ್ಯಕರ್ತರು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.