ADVERTISEMENT

ಕೂಡ್ಲಿಗಿ: ಸಿಲಿಂಡರ್ ಸ್ಫೋಟ, ಇಬ್ಬರು ಯುವಕರ ಸಾವು

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 14:00 IST
Last Updated 5 ಜೂನ್ 2022, 14:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೂಡ್ಲಿಗಿ (ವಿಜಯನಗರ): ತಾಲ್ಲೂಕಿನ ಗುಡೇಕೋಟೆ ಬಳಿಯ ಸಂಕ್ಲಾಪುರದಲ್ಲಿ ಭಾನುವಾರ ಸಿಲಿಂಡರ್ ಸ್ಫೋಟವಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಪ್ಪ(28) ಹಾಗೂ ಶ್ರೀಕಾಂತ್(23) ಮೃತರು.

ಸಂಕ್ಲಾಪುರ ಗ್ರಾಮದ ಹೊರಗಡೆ ನಿಂಗನಹಳ್ಳಿ ಮೊಂಡ ಬೋರಯ್ಯ ಎಂಬುವವರ ಎಗ್ ರೈಸ್ ಅಂಗಡಿಯಲ್ಲಿ ಮೊದಲು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸುವ ಕೆಲಸದಲ್ಲಿ ಗ್ರಾಮಸ್ಥರು ತೊಡಗಿದ್ದಾಗ ಸಿಲಿಂಡರ್ ಸ್ಫೋಟವಾಗಿದೆ. ಸ್ಥಳದಲ್ಲಿದ್ದ ಶಿವಪ್ಪ, ಶ್ರೀಕಾಂತ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಮೃತಪಟ್ಟಿದ್ದಾರೆ.

ADVERTISEMENT

ಸಿಪಿಐ ವಸಂತ ಅಸೋದೆ, ಗುಡೇಕೋಟೆ ಠಾಣೆಯ ಪಿಎಸ್‍ಐ ಶಾಂತಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.