ಕಾನಹೊಸಹಳ್ಳಿ(ವಿಜಯನಗರ): ಸಮೀಪದ ಆಲೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪಾದಚಾರಿಗಳ ಮೇಲೆ ಬುಧವಾರ ರಾತ್ರಿ ಲಾರಿ ಹರಿದು ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ.
ಆಲೂರು ಗ್ರಾಮದ ಸಿದ್ದಲಿಂಗಯ್ಯ(39), ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ದೇವಸಮುದ್ರ ಗ್ರಾಮದ ಕೊಟ್ರೇಶ(26) ಮೃತರು. ಹುಡೇಂ ಗ್ರಾಮದ ಶಿವಕುಮಾರ್ ಗಾಯಗೊಂಡಿದ್ದಾರೆ.
‘ಆಲೂರಿನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೆಂಗಳೂರು ಕಡೆಯಿಂದ ರಾಜಸ್ಥಾನದ ಕಡೆ ಹೊರಟಿದ್ದ ಲಾರಿ ಏಕಾಏಕಿ ಯುವಕರ ಮೇಲೆ ಹರಿದಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳು ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾನಾಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.