ADVERTISEMENT

ಪೂರ್ಣಕುಂಭದೊಂದಿಗೆ ಶಿಲಾವಿಗ್ರಹ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 4 ಮೇ 2022, 12:33 IST
Last Updated 4 ಮೇ 2022, 12:33 IST
ಹೊಸಪೇಟೆಯಲ್ಲಿ ಬುಧವಾರ ಬನ್ನಿ ಮಹಾಂಕಾಳಿ ದೇವಸ್ಥಾನದ ಶಿಲಾ ವಿಗ್ರಹಗಳನ್ನು ಬುಧವಾರ ಮೆರವಣಿಗೆಯಲ್ಲಿ ಪೂರ್ಣಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು
ಹೊಸಪೇಟೆಯಲ್ಲಿ ಬುಧವಾರ ಬನ್ನಿ ಮಹಾಂಕಾಳಿ ದೇವಸ್ಥಾನದ ಶಿಲಾ ವಿಗ್ರಹಗಳನ್ನು ಬುಧವಾರ ಮೆರವಣಿಗೆಯಲ್ಲಿ ಪೂರ್ಣಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು   

ಹೊಸಪೇಟೆ (ವಿಜಯನಗರ): ನಗರದ ನೇಕಾರ ಕಾಲೊನಿಯಲ್ಲಿ ನೂತನವಾಗಿ ನಿರ್ಮಿಸಿರುವ ಬನ್ನಿ ಮಹಾಂಕಾಳಿ ದೇವಸ್ಥಾನದ ಶಿಲಾ ವಿಗ್ರಹಗಳನ್ನು ಬುಧವಾರ ಮೆರವಣಿಗೆಯಲ್ಲಿ ಪೂರ್ಣಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು.

ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಗಣೇಶ, ಆಂಜನೇಯ ಹಾಗೂ ಬನ್ನಿ ಮಹಾಂಕಾಳಮ್ಮ ದೇವಿ ಮೂರ್ತಿಗಳನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಪೂರ್ಣಕುಂಭ ಹೊತ್ತು ಮಹಿಳೆಯರು ಹೆಜ್ಜೆ ಹಾಕಿದರು. ಶುಕ್ರವಾರ ಬೆಳಿಗ್ಗೆ 8ಕ್ಕೆ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗುತ್ತದೆ ಎಂದು ಬನ್ನಿ ಮಹಾಂಕಾಳಿ ಸೇವಾ ಟ್ರಸ್ಟಿನ ಅಧ್ಯಕ್ಷ ಕೆ‌.ಎಂ.ಗುರುರಾಜ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT