ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಸೋಮವಾರ 1,38,673 ಕ್ಯುಸೆಕ್ಗೆ ಏರಿಕೆಯಾಗಿದೆ.
ಒಳಹರಿವು ಹೆಚ್ಚಾಗಿರುವುದರಿಂದ ನದಿಗೆ 1,15,88 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1632.10 ಅಡಿ ನೀರಿನ ಸಂಗ್ರಹವಿದೆ. ಎಲ್ಲ 33 ಕ್ರಸ್ಟ್ಗೇಟ್ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. 20 ಕ್ರಸ್ಟ್ಗೇಟ್ಗಳನ್ನು 2.5 ಅಡಿ, 13 ಗೇಟ್ಗಳನ್ನು 1.5 ಅಡಿ ಮೇಲಕ್ಕೆತ್ತಿ ನೀರು ಹರಿಸಲಾಗುತ್ತಿದೆ. ಭಾನುವಾರ 1,09,106 ಕ್ಯುಸೆಕ್ ಒಳಹರಿವು ಇತ್ತು.
ಸೇತುವೆಗೆ ಸಮನಾಗಿ ನೀರು ಹರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕಂಪ್ಲಿ–ಗಂಗಾವತಿ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹಂಪಿಯ ಕರ್ಮ ಮಂಟಪ, ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಸ್ನಾನಘಟ್ಟ, ಚಕ್ರತೀರ್ಥ ಅನೇಕ ದಿನಗಳಿಂದ ಮುಳುಗಿದ ಸ್ಥಿತಿಯಲ್ಲೇ ಇವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.