ಹೊಸಪೇಟೆ (ವಿಜಯನಗರ): ಕಂದಾಯ ಸಚಿವ ಆರ್. ಅಶೋಕ್ ಅವರು ಜಿಲ್ಲೆಯ ಕೂಡ್ಲಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿದರು.
₹10 ಕೋಟಿಯಲ್ಲಿ ನಿರ್ಮಿಸಿರುವ ಮಿನಿ ವಿಧಾನಸೌಧ, ₹3 ಕೋಟಿಯಲ್ಲಿ ಮಹಾದೇವ ಮೈಲಾರ ಕ್ರೀಡಾಂಗಣ, ₹1.80 ಕೋಟಿಯ ಪಟ್ಟಣ ಪಂಚಾಯಿತಿ ನೂತನ ಕಟ್ಟಡ, ₹1.50 ಕೋಟಿ ಯ ಮಹರ್ಷಿ ವಾಲ್ಮೀಕಿ ಭವನ, ₹1.40 ಕೋಟಿಯ ಗುರು ಭವನ ಉದ್ಘಾಟಿಸಿದರು.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಾರಿಗೆ ಸಚಿವ ಬಿ. ಶ್ರೀರಾಮುಲು, ಸ್ಥಳೀಯ ಶಾಸಕ ಎನ್.ವೈ. ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ., ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯರ್ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.