ಹೊಸಪೇಟೆ (ವಿಜಯನಗರ): ‘ಪಿಎಸ್ಐ ಪರೀಕ್ಷೆ ಅಕ್ರಮದ ತನಿಖೆಯಲ್ಲಿ ಕಾಂಗ್ರೆಸ್ ತಲೆಗಳೇ ಹೆಚ್ಚು ಉರುಳಲಿವೆ. ಆದರೆ, ಕಾಂಗ್ರೆಸ್ನವರು ಶುದ್ಧಹಸ್ತರಂತೆ ಆರೋಪ ಮಾಡುತ್ತಿದ್ದಾರೆ. ಕಲ್ಲು ಹೊಡೆದು ಓಡುವ ಸ್ವಭಾವ ಕಾಂಗ್ರೆಸ್ಸಿಗರದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವುದು ಗೊತ್ತಾದ ಕೂಡಲೇ ನಮ್ಮ ಸರ್ಕಾರ ಸಿಐಡಿಯಿಂದ ತನಿಖೆ ಆರಂಭಿಸಿತು. ಈಗಾಗಲೇ ಅನೇಕರನ್ನು ಬಂಧಿಸಲಾಗಿದೆ. ಪಾರದರ್ಶಕವಾಗಿ ತನಿಖೆ ನಡೆಯುತ್ತಿದ್ದು, ನಮ್ಮ ಪಕ್ಷವಾಗಲಿ, ಸರ್ಕಾರವಾಗಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಯಾರು, ಎಷ್ಟೇ ಪ್ರಭಾವಿಶಾಲಿಯಾಗಿದ್ದರೂ ಬಿಡುವುದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.