ADVERTISEMENT

ಮಳೆಗೆ ಹಂಪಿಯಲ್ಲಿ ಇನ್ನಷ್ಟು ಸ್ಮಾರಕ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2022, 13:52 IST
Last Updated 14 ಜುಲೈ 2022, 13:52 IST
ಹಂಪಿ ಕರ್ಮ ಮಂಟಪ
ಹಂಪಿ ಕರ್ಮ ಮಂಟಪ   

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದಿಂದ ನದಿಗೆ ಗುರುವಾರ 1.41 ಲಕ್ಷ ಕ್ಯುಸೆಕ್ ನೀರು ಹರಿಸಿರುವುದರಿಂದ ಹಂಪಿ ರಾಮ–ಲಕ್ಷ್ಮಣ ದೇವಸ್ಥಾನ, ಅದಕ್ಕೆ ಹೊಂದಿಕೊಂಡಿರುವ ಸಾಲು ಮಂಟಪಗಳು, ಕರ್ಮ ಮಂಟಪ ಮುಳುಗಿದೆ.

ಹಂಪಿಯ ಸ್ನಾನಘಟ್ಟ, ಚಕ್ರತೀರ್ಥ, ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಕಂಪ್ಲಿ-ಗಂಗಾವತಿ ಸೇತುವೆ ಬುಧವಾರವೇ ಮುಳುಗಡೆಯಾಗಿದ್ದವು.

ನದಿಯಲ್ಲಿ ಸತತ ನೀರಿನ ಹರಿವು ಹೆಚ್ಚಾಗುತ್ತಿದ್ದು, ನದಿ ತೀರದಲ್ಲಿ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಇನ್ನಷ್ಟೇ ಹಾನಿಯ ಪ್ರಮಾಣ ಗೊತ್ತಾಗಬೇಕಿದೆ. ಒಟ್ಟು 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 97.753 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. 1,04,503 ಕ್ಯುಸೆಕ್ ಒಳಹರಿವು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.