ಹೊಸಪೇಟೆ (ವಿಜಯನಗರ): ‘ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಯಲ್ಲಿ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಹಿಂದಿನಿಂದಲೂ ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದೆ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.
ಈ ಹಿಂದೆ ಟಿಪ್ಪು ಜಯಂತಿ ಆಚರಿಸಿ ವಿನಾಕಾರಣ ಗೊಂದಲ ಸೃಷ್ಟಿಸಿದ್ದರು. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿಯಲ್ಲಿ ಇವರಿಂದಲೇ ಸಮಸ್ಯೆಯಾಯಿತು. ಈಶ್ವರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ನವರೇ ಸಂತೋಷ್ ಪಾಟೀಲ ಅವರ ಕೊಲೆ ಏಕೆ ಮಾಡಿಸಿರಬಾರದು? ಭಾರತ ನೆಲದಲ್ಲಿ ಈ ಹಿಂದೆ ಪಾಕಿಸ್ತಾನದ ಧ್ವಜ ಹಾರಿಸಿದ ಪಾಪಿಗಳಿದ್ದಾರೆ. ಹಿಂದೂ ದೇವಾಲಯಗಳನ್ನು ವಿಕೃತಗೊಳಿಸಿದ್ದಾರೆ. ಇವರೆಲ್ಲರಿಗೂ ಕಾಂಗ್ರೆಸ್ ಸಹಕಾರ ನೀಡಿದೆ ಎಂದು ಭಾನುವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.