ಹೊಸಪೇಟೆ (ವಿಜಯನಗರ): ಇಲ್ಲಿನ ನಗರಸಭೆಯ ಐವರು ಕಾಂಗ್ರೆಸ್ ಸದಸ್ಯರು ಸೋಮವಾರ ಬಿಜೆಪಿ ಸೇರ್ಪಡೆಯಾದರು.
ಸದಸ್ಯರಾದ ಎಚ್.ಕೆ. ಮಂಜುನಾಥ, ರೋಹಿಣಿ ವೆಂಕಟೇಶ, ರಾಧಾ ಗುಡಗುಂಟಿ ಮಲ್ಲಿಕಾರ್ಜುನ, ಲಕ್ಷ್ಮಿ ಚಂದ್ರಶೇಖರ್ ಪರಗಂಟಿ ಹಾಗೂ ಹುಲುಗಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುದಲ್ಲಿ ಬಿಜೆಪಿ ಸೇರಿದರು. ಅವರಿಗೆ ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿದರು.
ಇತ್ತೀಚಿಗೆ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅವಲೋಕನ ಮತ್ತು ಅಭಿನಂದನಾ ಸಮಾರಂಭದ ಆರಂಭದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಜರುಗಿತು.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಶಾಸಕರಾದ ಶಶೀಲ್ ನಮೋಶಿ, ವೈ.ಎಂ. ಸತೀಶ ರೆಡ್ಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ, ಅಶ್ವತ್ಥ ನಾರಾಯಣ, ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.