ADVERTISEMENT

ಹರಪನಹಳ್ಳಿ: ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 13:43 IST
Last Updated 21 ಏಪ್ರಿಲ್ 2022, 13:43 IST
ನಾರದಮುನಿ ರಥೋತ್ಸವ
ನಾರದಮುನಿ ರಥೋತ್ಸವ   

ಹರಪನಹಳ್ಳಿ: ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದ ನಾರದಮುನಿ ರಥೋತ್ಸವದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ದಾವಣಗೆರೆಯ ಸುರೇಶ್‌ ಬಸವನಗೌಡ (45) ಎಂದು ಗುರುತಿಸಲಾಗಿದೆ. ತೇರು ಚಲಿಸುವಾಗ ನೂಕು ನುಗ್ಗಲಿನಲ್ಲಿ ಸುರೇಶ್‌ ಚಕ್ರದ ಅಡಿಗೆ ಸಿಲುಕಿದ್ದಾರೆ. ಅವರ ಮೇಲೆ ಗಾಲಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೇರು ದೇವಸ್ಥಾನದಿಂದ ಸ್ವಲ್ಪ ದೂರ ಕ್ರಮಿಸಿದಾಗ ಈ ಘಟನೆ ನಡೆದಿದೆ. ಘಟನೆಯಿಂದ ಭಕ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಪೊಲೀಸರು ಜನರನ್ನು ನಿಯಂತ್ರಿಸಿ, ಶವ ತೆಗೆದು ಆಸ್ಪತ್ರೆಗೆ ಸಾಗಿಸಿದರು. ಬಳಿಕ ತೇರಿನ ಗಾಲಿಯನ್ನು ನೀರಿನಿಂದ ತೊಳೆದು ದೇವಸ್ಥಾನದ ವರೆಗೆ ಎಳೆಯಲಾಯಿತು. ಸಂಜೆಯ ಘಟನೆಯಿಂದ ದಿನವಿಡೀ ಇದ್ದ ಸಂಭ್ರಮ ಮರೆಯಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.