ADVERTISEMENT

ವಿಜಯನಗರ | ಸಿಡಿಲಿನಿಂದ ಸ್ವಲ್ಪದರಲ್ಲೇ ಪಾರು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 18:18 IST
Last Updated 15 ಮಾರ್ಚ್ 2023, 18:18 IST
   

ಹರಪನಹಳ್ಳಿ (ವಿಜಯನಗರ): ಸಿಡಿಲಿಗೆ ವ್ಯಕ್ತಿಯೊಬ್ಬರು ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಪಟ್ಟಣದ ತರಳಬಾಳು ಕಲ್ಯಾಣ ಮಂಟಪದ ಸಮೀಪ ಬುಧವಾರ ರಾತ್ರಿ ನಡೆದಿದೆ.

ಕಲ್ಯಾಣ ಮಂಟಪ ಹಿಂಭಾಗದಲ್ಲಿ ಬಸವರಾಜ ಸಂಗಪ್ಪನವರ್‌ ಮನೆ ಇದೆ. ಅವರು ಕಾರಿನಲ್ಲಿ ಬಂದು, ಮನೆಯ ಮುಂದೆ ನಿಲ್ಲಿಸಿದ್ದ ಬೈಕ್‌ ತೆಗೆದು ಕಾಂಪೌಂಡ್‌ ಒಳಗೆ ನಿಲ್ಲಿಸುತ್ತಿದ್ದಾಗ ಕೂಗಳತೆ ದೂರದ ತೆಂಗಿನಮರಕ್ಕೆ ಸಿಡಿಲು ಬಡಿದು, ಬೆಂಕಿ ಹೊತ್ತಿಕೊಂಡು ಉರಿದಿದೆ. ಇದರಿಂದ ಬಸವರಾಜ ಅವರ ಬಲಗೈಗೆ ಸಿಡಿಲಿನ ಬಿಸಿ ತಾಗಿದೆ. ಬಳಿಕ ಅಗ್ನಿಶಾಮದ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.

ಬಸವರಾಜ ಅವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿದ್ದಾರೆ. ‘ಈ ದಿನ ನನ್ನನ್ನು ದೇವರೇ ಉಳಿಸಿದ್ದಾನೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಅವಳಿ ಜಿಲ್ಲೆಗಳಾದ ವಿಜಯನಗರ–ಬಳ್ಳಾರಿಯ ಬಹುತೇಕ ಭಾಗಗಳಲ್ಲಿ ರಾತ್ರಿ ಗುಡುಗು, ಮಿಂಚು ಸಹಿತ ತುಂತುರು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.