ADVERTISEMENT

ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಿ: ಮುಸ್ಲಿಂ ಮುಖಂಡರ ಮನವಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 16:17 IST
Last Updated 20 ಏಪ್ರಿಲ್ 2024, 16:17 IST
ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಿರುಗುಪ್ಪದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಶಂಶಂ ಆಲಾಂ ಅವರಿಗೆ ಮನವಿ ಸಲ್ಲಿಸಿದರು
ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಿರುಗುಪ್ಪದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಶಂಶಂ ಆಲಾಂ ಅವರಿಗೆ ಮನವಿ ಸಲ್ಲಿಸಿದರು   

ಸಿರುಗುಪ್ಪ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಫಯಾಜ್‌ ಎಂಬುವನಿಗೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಮುಖಂಡರು ತಹಶೀಲ್ದಾರ ಶಂಶಂ ಆಲಾಂ ಅವರಿಗೆ ಮನವಿ ಸಲ್ಲಿಸಿದರು.

ಚೌದ್ರಿ ಹಾರೂನ್ ಸಾಬ್ ಮಾತನಾಡಿ, ಅಮಾಯಕ ಮಹಿಳೆಯರ ಮೇಲೆ ನಡೆಯುವ ಇಂತಹ ದೌರ್ಜನ್ಯಗಳು ಇನ್ನು ಮುಂದೆ ನಡೆಯಂದತೆ ಕಠಿಣವಾದ ಕಾನೂನು ಜಾರಿಗೊಳಿಸಿ ಉಗ್ರ ಶಿಕ್ಷೆ ನೀಡಬೇಕು ಎಂದು ತಿಳಿಸಿದರು.

ಮುಖಂಡರಾದ ಚೌದ್ರಿ ಖಾಜಾ ಸಾಬ್, ಹೋಟಲ್ ಗಫೂರ್ ಸಾಬ್, ಹಂಡಿ ಆಸಿಂ ಸಾಬ್, ಜಿಲಾನಿ ಸಾಬ್, ನಭೀ ಸಾಬ್, ಶರೀಫ್ ಸಾಬ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.