ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಗುರುವಾರ ಸಂಜೆ ಗಂಟೆಗೂ ಹೆಚ್ಚು ಸಮಯ ಬಿರುಸಿನ ಮಳೆಯಾಗಿದೆ.
ಗುರುವಾರ ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ತಂಗಾಳಿ ಬೀಸುತ್ತಿತ್ತು. ಸಂಜೆ ಕಾರ್ಮೋಡ ಕವಿದು ಜೋರು ಮಳೆಯಾಗಿದೆ. ಬಿರುಸಿನ ಮಳೆಯಾಗಿದ್ದರಿಂದ ರಾಣಿಪೇಟೆ, ಪಟೇಲ್ ನಗರ, ಬಸವೇಶ್ವರ ಬಡಾವಣೆ, ಅಮರಾವತಿ, ಚಿತ್ತವಾಡ್ಗಿಯ ರಸ್ತೆಯಲ್ಲಿ ಅಪಾರ ನೀರು ಸಂಗ್ರಹಗೊಂಡಿತು.
ತಾಲ್ಲೂಕಿನ ಹೊಸೂರು, ಇಪ್ಪಿತ್ತೇರಿ ಮಾಗಾಣಿ, ವ್ಯಾಸನಕೆರೆ, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ಕಾಳಘಟ್ಟ, ಕೊಂಡನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿತ್ಯ ಸಂಜೆಯಾಗುತ್ತಿದ್ದಂತೆ ಮಳೆ ಸಾಮಾನ್ಯ ಎಂಬಂತಾಗಿದೆ. ನಿರಂತರ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.