ADVERTISEMENT

ಹೊಸಪೇಟೆ: ಒಂದು ಗಂಟೆ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 15:26 IST
Last Updated 19 ಆಗಸ್ಟ್ 2021, 15:26 IST
ಹೊಸಪೇಟೆಯಲ್ಲಿ ಗುರುವಾರ ಸಂಜೆ ಬಿರುಸಿನ ಮಳೆಯಾಯಿತು. ಸುರಿವ ಮಳೆಯಲ್ಲೇ ನಗರದ ಕಾಲೇಜು ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಬೈಸಿಕಲ್‌ ತುಳಿದುಕೊಂಡು ಹೋದರು
ಹೊಸಪೇಟೆಯಲ್ಲಿ ಗುರುವಾರ ಸಂಜೆ ಬಿರುಸಿನ ಮಳೆಯಾಯಿತು. ಸುರಿವ ಮಳೆಯಲ್ಲೇ ನಗರದ ಕಾಲೇಜು ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಬೈಸಿಕಲ್‌ ತುಳಿದುಕೊಂಡು ಹೋದರು   

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಗುರುವಾರ ಸಂಜೆ ಗಂಟೆಗೂ ಹೆಚ್ಚು ಸಮಯ ಬಿರುಸಿನ ಮಳೆಯಾಗಿದೆ.

ಗುರುವಾರ ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ತಂಗಾಳಿ ಬೀಸುತ್ತಿತ್ತು. ಸಂಜೆ ಕಾರ್ಮೋಡ ಕವಿದು ಜೋರು ಮಳೆಯಾಗಿದೆ. ಬಿರುಸಿನ ಮಳೆಯಾಗಿದ್ದರಿಂದ ರಾಣಿಪೇಟೆ, ಪಟೇಲ್‌ ನಗರ, ಬಸವೇಶ್ವರ ಬಡಾವಣೆ, ಅಮರಾವತಿ, ಚಿತ್ತವಾಡ್ಗಿಯ ರಸ್ತೆಯಲ್ಲಿ ಅಪಾರ ನೀರು ಸಂಗ್ರಹಗೊಂಡಿತು.

ತಾಲ್ಲೂಕಿನ ಹೊಸೂರು, ಇಪ್ಪಿತ್ತೇರಿ ಮಾಗಾಣಿ, ವ್ಯಾಸನಕೆರೆ, ನಾಗೇನಹಳ್ಳಿ, ಬಸವನದುರ್ಗ, ಧರ್ಮದಗುಡ್ಡ, ಕಾಳಘಟ್ಟ, ಕೊಂಡನಾಯಕನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ನಿತ್ಯ ಸಂಜೆಯಾಗುತ್ತಿದ್ದಂತೆ ಮಳೆ ಸಾಮಾನ್ಯ ಎಂಬಂತಾಗಿದೆ. ನಿರಂತರ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.