ADVERTISEMENT

ವಿಜಯನಗರದ ಟಿ.ಬಿ. ಡ್ಯಾಂ ಬಳಿ ವ್ಯಕ್ತಿಯ ಬರ್ಬರ ಕೊಲೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 5:56 IST
Last Updated 21 ಮಾರ್ಚ್ 2021, 5:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹೊಸಪೇಟೆ (ವಿಜಯನಗರ): ನಗರದ ತುಂಗಭದ್ರಾ ಜಲಾಶಯ‌ ಸಮೀಪದ ರೈಲು ಹಳಿ ಬಳಿ ವ್ಯಕ್ತಿಯೊಬ್ಬರ ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಲಾಗಿದೆ. ಮೃತರನ್ನು ಟಿ.ಬಿ. ಡ್ಯಾಂ ಪಿಎಲ್ ಸಿ ನಿವಾಸಿ ಮೈಕಲ್ ಜಾನ್ (40) ಎಂದು ಗುರುತಿಸಲಾಗಿದೆ.

'ಜಾನ್ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ ನಂತರ ಅವರ ಮೃತದೇಹವನ್ನು ರೈಲು ಹಳಿ ಬಳಿ ಬಿಸಾಕಿ ಹೋಗಿರುವ ಸಾಧ್ಯತೆ ಇದೆ.

ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ. ಕೊಲೆಗೆ ಇನ್ನಷ್ಟೇ ಕಾರಣ ಗೊತ್ತಾಗಬೇಕಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ' ಎಂದು ಟಿ.ಬಿ. ಡ್ಯಾಂ ಸಿಪಿಐ ಎ. ನಾರಾಯಣ ಪ್ರಜಾವಾಣಿಗೆ ತಿಳಿಸಿದ್ದಾರೆ.

ADVERTISEMENT

ಇತ್ತೀಚೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.