ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಮಲಪನಗುಡಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಂಭಾವ್ಯ ಭೇಟಿ ಇಲ್ಲ ಎಂದು ಗೊತ್ತಾಗಿದೆ.
ಏ. 24ರಂದು ನಡೆಯಲಿರುವ ಪಂಚಾಯತ್ರಾಜ್ ದಿವಸ್ ಕಾರ್ಯಕ್ರಮಕ್ಕೆ ತಾಲ್ಲೂಕಿನ ಮಲಪನಗುಡಿ ಗ್ರಾಮ ಪಂಚಾಯಿತಿ ಸೇರಿದಂತೆ ರಾಜ್ಯದ ಮೂರು ಪಂಚಾಯಿತಿಗಳು ಆಯ್ಕೆಯಾಗಿದ್ದವು. ಈ ಪೈಕಿ ಅಂತಿಮಗೊಳ್ಳುವ ಒಂದು ಪಂಚಾಯಿತಿಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇತ್ತು. ಅದಕ್ಕಾಗಿ ಪಂಚಾಯಿತಿ ಮಟ್ಟದಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ, ಏ. 24ರಂದು ಪ್ರಧಾನಿಯವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದರಿಂದ ರಾಜ್ಯಕ್ಕೆ ಭೇಟಿ ಕೊಡುವ ಸಾಧ್ಯತೆ ಕ್ಷೀಣಿಸಿದೆ ಎಂದು ಮೂಲಗಳಿಂದ ಗೊತ್ತಾಗಿದೆ.
‘ಪ್ರಧಾನಿ ಭೇಟಿ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೆ, ರಾಜ್ಯದ ಮೂರು ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಅವರು ಭೇಟಿ ಕೊಡುವ ಸಾಧ್ಯತೆ ತೀರ ಕಡಿಮೆ’ ಎಂದು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ‘ಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.