ADVERTISEMENT

ಶ್ರೀರಾಮ ಸೇನೆಯ ಕಾರ್ಯಕರ್ತರ ಬಂಧನ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 7:20 IST
Last Updated 2 ಜುಲೈ 2022, 7:20 IST
   

ಹೊಸಪೇಟೆ (ವಿಜಯನಗರ): ಶ್ರೀರಾಮ ಸೇನೆಯ ಕಾರ್ಯಕರ್ತರ ಬಂಧನ ವಿರೋಧಿಸಿ ನಗರದ ಮಹಾತ್ಮ ಗಾಂಧಿ ವೃತ್ತದ ಎದುರು ಶನಿವಾರ ಪ್ರತಿಭಟನೆ ನಡೆಸಲು ಮುಂದಾದ ಹಡಗಲಿಯ ಅಭಿನವ ಹಾಲಸ್ವಾಮೀಜಿ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದರು.

ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನದ ಬಳಿ ಬೆಳಿಗ್ಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾಗ ಅವರನ್ನು ಪೊಲೀಸರು ಬಂಧಿಸಿ, ವೇದಿಕೆ ತೆರವುಗೊಳಿಸಿದ್ದರು. ಅದನ್ನು ವಿರೋಧಿಸಿ ಹಾಲಸ್ವಾಮೀಜಿ ನೇತೃತ್ವದಲ್ಲಿ ಕೆಲವರು ಗಾಂಧಿ ವೃತ್ತದಲ್ಲಿ ಸೇರಿ, ಬಾಯಿಗೆ ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದರು.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ಬಂಧಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.