ಹೊಸಪೇಟೆ (ವಿಜಯನಗರ): ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು
ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೊಸ ಗರಗ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪಿ. ಶಾಮ್ರಾಜ್ (18) ಮೃತ ವಿದ್ಯಾರ್ಥಿ. ‘ಸಂಡೂರಿನ ಶ್ರೀಶೈಲ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಶಾಮ್ರಾಜ್ ಪರೀಕ್ಷೆ ಬರೆದಿದ್ದ. ಬೆಳಿಗ್ಗೆ ಕುಟುಂಬ ಸದಸ್ಯರೊಡನೆ ಹೊಲಕ್ಕೆ ಬಿತ್ತನೆಗೆ ಹೋಗಿದ್ದ. ಮಧ್ಯಾಹ್ನ ಆನ್ಲೈನ್ನಲ್ಲಿ ಫಲಿತಾಂಶ ನೋಡಿದ್ದಾನೆ. ಗಣಿತ ವಿಷಯದಲ್ಲಿ ಫೇಲಾಗಿದ್ದು ತಿಳಿದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.