ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ.
ಬೆಳಿಗ್ಗೆಯಿಂದಲೇ ಕಾರ್ಮೋಡ ಕವಿದಿತ್ತು. ಮಧ್ಯಾಹ್ನ ಆರಂಭವಾದ ಜಿಟಿಜಿಟಿ ಮಳೆ ಆಗಾಗ ಬಿಡುವು ಕೊಡುತ್ತ ದಿನವಿಡೀ ಸುರಿಯಿತು. ಸತತ ಮಳೆಗೆ ವಾತಾವರಣ ಸಂಪೂರ್ಣ ತಂಪಾಗಿದೆ. ಸಂಪೂರ್ಣ ಲಾಕ್ಡೌನ್, ಸತತ ಮಳೆಯಿಂದ ಭಾನುವಾರ ಬಹುತೇಕ ರಸ್ತೆಗಳು ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿದ್ದವು.
ತಾಲ್ಲೂಕಿನ ಹಂಪಿ, ಕಮಲಾಪುರ, ಕಡ್ಡಿರಾಂಪುರ, ಬುಕ್ಕಸಾಗರ, ಹೊಸೂರು, ನಾಗೇನಹಳ್ಳಿ, ಧರ್ಮದಗುಡ್ಡ, ಇಪ್ಪಿತ್ತೇರಿ ಮಾಗಾಣಿ, ಬಸವನದುರ್ಗ ಸೇರಿದಂತೆ ಹಲವೆಡೆ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.