ADVERTISEMENT

ಭಾರಿ ಮಳೆ: ವಿಜಯನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 4:11 IST
Last Updated 2 ಆಗಸ್ಟ್ 2022, 4:11 IST
ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ.
ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ.    

ಹೊಸಪೇಟೆ (ವಿಜಯನಗರ): ಭಾರಿ ಮಳೆಯಾಗುತ್ತಿರುವ ಕಾರಣ ಮಂಗಳವಾರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಆದೇಶ ಹೊರಡಿಸಿದ್ದಾರೆ.

ಬರುವ ಭಾನುವಾರ ಹೆಚ್ಚುವರಿ ತರಗತಿಗಳನ್ನು ನಡೆಸಿ, ರಜೆ ದಿನವನ್ನು ಸರಿದೂಗಿಸಲಾಗುವುದು ಎಂದು ತಿಳಿಸಿದ್ದಾರೆ.

ಗದ್ದೆಗೆ ನುಗ್ಗಿದ ನೀರು:

ADVERTISEMENT

ಸತತ ಮಳೆಗೆ ತಾಲ್ಲೂಕಿನ ಹಂಪಿ ಸಮೀಪದ ಬಾಳೆ ಗದ್ದೆಗಳಿಗೆ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಉಗ್ರ ನರಸಿಂಹ ಸ್ಮಾರಕಕ್ಕೆ ಹೋಗುವ ಮಾರ್ಗದಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.