ಹೊಸಪೇಟೆ (ವಿಜಯನಗರ): ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಇಲ್ಲಿನ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದರು.
ಅನಂತರ ಅವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಅನಂತರ ಪೊಲೀಸರು, ಎನ್.ಸಿ.ಸಿ. ಕೆಡೆಟ್ಸ್ ಗಳು, ಸ್ಕೌಟ್ಸ್ ಅಂಡ್ ಗೈಡ್ಸ್, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಸಂಸದ ವೈ. ದೇವೇಂದ್ರಪ್ಪ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ, ನಗರಸಭೆ ಅಧ್ಯಕ್ಷ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್. ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಹುಡಾ ಅಧ್ಯಕ್ಷ ಅಶೋಕ ಜೀರೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.