ಹೊಸಪೇಟೆ (ವಿಜಯನಗರ): ಮುಕ್ತಿಗಾಗಿ ನಿವೃತ್ತ ಶಿಕ್ಷಕರೊಬ್ಬರು ತಾಲ್ಲೂಕಿನ ಹಂಪಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಸುಣ್ಣಕಲ್ ಬಿದರಿಯ ಗಂಗಪ್ಪ ಕರಿಯಲ್ಲಪ್ಪನವರ್ (82) ಮೃತ ಶಿಕ್ಷಕ. ಶಿಕ್ಷಕರ ದಿನಾಚರಣೆ ಮುನ್ನ ದಿನವಾದ ಸೆ. 4ರ ರಾತ್ರಿ ಹಂಪಿ ಹೇಮಕೂಟದ ಜೈನ್ ದೇಗುಲದಲ್ಲಿ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ. ಹಂಪಿ ವಿರೂಪಾಕ್ಷೇಶ್ವರ ಸನ್ನಿಧಿಯಲ್ಲಿ ಮುಕ್ತಿ ಹೊಂದಬೇಕೆಂಬ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.