ಹೊಸಪೇಟೆ (ವಿಜಯನಗರ): ನಗರದ ಏಳನೇ ವಾರ್ಡಿನ ಪಾಂಡುರಂಗ ಕಾಲೊನಿಯಲ್ಲಿ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಯನ್ನು ಕೊನೆಗೂ ಪೂರ್ಣಗೊಳಿಸಲಾಗಿದೆ.
‘ಅಪೂರ್ಣ ಕಾಮಗಾರಿ; ಸಂಕಷ್ಟ’ ಶೀರ್ಷಿಕೆ ಅಡಿ ಜು. 23ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ವರದಿಗೆ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆಯು ಗುರುವಾರ (ಆ.12) ಕಾಮಗಾರಿ ಪೂರ್ಣಗೊಳಿಸಿದೆ.
‘ಕಾಮಗಾರಿಗೆ ಅರ್ಧಕ್ಕೆ ನಿಲ್ಲಿಸಿದ್ದರಿಂದ ಜನ ಓಡಾಡಲು ಬಹಳ ತೊಂದರೆಯಾಗುತ್ತಿತ್ತು. ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ವರದಿ ಬೆನ್ನಲ್ಲೆ ಕಾಮಗಾರಿ ಆರಂಭಿಸಿದರು. ಈಗ ಕೆಲಸ ಪೂರ್ಣಗೊಂಡಿದ್ದು, ಖುಷಿಯಾಗಿದೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.