ADVERTISEMENT

ಹೊಸಪೇಟೆ: ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 9:32 IST
Last Updated 1 ಜುಲೈ 2021, 9:32 IST
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್‌ ಜೀರೆ ಗುರುವಾರ ಹೊಸಪೇಟೆಯಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್‌ ಜೀರೆ ಗುರುವಾರ ಹೊಸಪೇಟೆಯಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು   

ಹೊಸಪೇಟೆ (ವಿಜಯನಗರ): ಜಿಲ್ಲಾ ಖನಿಜ ನಿಧಿಯ ಅನುದಾನದಲ್ಲಿ ಸೋಗಿ ಮಾರುಕಟ್ಟೆಯಿಂದ ಕನಕದಾಸ ವೃತ್ತದ ವರೆಗಿನ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುರುವಾರ ನಗರದಲ್ಲಿ ಚಾಲನೆ ನೀಡಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್‌ ಜೀರೆ, ಮಾಜಿ ಹುಡಾ ಅಧ್ಯಕ್ಷ ಅಯ್ಯಾಳಿ ತಿಮ್ಮಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

‘ಲಾಕ್‌ಡೌನ್‌ ಬಹುತೇಕ ತೆರವುಗೊಳಿಸಿರುವುದರಿಂದ ಮತ್ತೆ ಅಭಿವೃದ್ಧಿ ಕಾಮಗಾರಿಗಳು ಚುರುಕುಗೊಂಡಿವೆ. ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ವಿಶೇಷ ಕಾಳಜಿಯಿಂದಾಗಿ ನಗರದ ಎಲ್ಲ ರಸ್ತೆಗಳು ಅಭಿವೃದ್ಧಿ ಕಾಣುತ್ತಿವೆ. ವಾಹನಗಳ ಸುಗಮ ಸಂಚಾರ ಸಾಧ್ಯವಾಗಲಿದೆ’ ಎಂದು ಅಯ್ಯಾಳಿ ತಿಮ್ಮಪ್ಪ ಹೇಳಿದರು.

ADVERTISEMENT

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕಿಶೋರ್‌ ಕುಮಾರ್‌ ಮಾತನಾಡಿ, ‘2020-21ನೇ ಸಾಲಿನ ಜಿಲ್ಲಾ ಖನಿಜ ನಿಧಿ ಅನುದಾನದ ಅಡಿಯಲ್ಲಿ ಸೋಗಿ ಮಾರುಕಟ್ಟೆಯಿಂದ ಕನಕದಾಸ ವೃತ್ತದ ವರೆಗೆ ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ₹60 ಲಕ್ಷ ವೆಚ್ಚದಲ್ಲಿ ಮಾಡಲಾಗುವುದು’ ಎಂದು ತಿಳಿಸಿದರು.

ಸಚಿವ ಆನಂದ್ ಸಿಂಗ್ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.