ADVERTISEMENT

ಶಾಸಕ ಭೀಮಾ ನಾಯ್ಕರಿಂದ ನೂರು ಕುಟುಂಬಕ್ಕೆ ತಲಾ ₹10,000 ಪರಿಹಾರ

​ಪ್ರಜಾವಾಣಿ ವಾರ್ತೆ
Published 29 ಜೂನ್ 2021, 8:35 IST
Last Updated 29 ಜೂನ್ 2021, 8:35 IST
   

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ 100 ಕುಟುಂಬದವರಿಗೆ ಶಾಸಕ ಎಸ್‌. ಭೀಮಾ ನಾಯ್ಕ ಅವರು ಮಂಗಳವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ‘ಆತ್ಮನಮನ’ ಕಾರ್ಯಕ್ರಮದಲ್ಲಿ ತಲಾ ₹10,000 ಪರಿಹಾರ ವಿತರಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಮೃತರ ನೆನಪಿನಲ್ಲಿ 100 ಸಸಿಗಳನ್ನು ನೆಡಲಾಯಿತು. ಬಳಿಕ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ, ಕಾಗಿನಲೆ ಪೀಠದ ನಿರಂಜನಾನಂದ ಪುರಿ ಸ್ವಾಮೀಜಿ, ಭಗೀರಥ ಪೀಠದ ಪುರುಷೋತ್ತಮಾನಂದ ಸ್ವಾಮೀಜಿ, ಮಡಿವಾಳ ಪೀಠದ ಸ್ವಾಮೀಜಿ ಸೇರಿದಂತೆ 12 ಜನ ಮಠಾಧೀಶರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.