
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಹರಪನಹಳ್ಳಿ: ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಮೇವು ಮಾರಾಟ ಮಾಡುವ ರೈತರು ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ ಜ್ಯೋತಿ ಅವರನ್ನು ಸಂಪರ್ಕಿಸುವಂತೆ ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ತಿಳಿಸಿದ್ದಾರೆ.
ಭತ್ತ, ರಾಗಿ ಮೇವು ಇದ್ದು, ಮಾರಾಟ ಮಾಡಲು ಇಚ್ಚಿಸುವ ರೈತರಿಂದ 1 ಟನ್ಗೆ ಸಾಗಣೆ ವೆಚ್ಚ ಸೇರಿ ₹6,000 ದರ ನಿಗಧಿಪಡಿಸಲಾಗಿದೆ. ಆಸಕ್ತರು ಮೊ: 9449027220 ಸಂಪರ್ಕಿಸಿ ಮೇವು ಮಾರಾಟ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.