ADVERTISEMENT

ಸಾಹಿತಿ ಕುಂ.ಬಾ. ಸದಾಶಿವಪ್ಪ ನಿಧನ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 9:46 IST
Last Updated 2 ಜುಲೈ 2022, 9:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹರಪನಹಳ್ಳಿ (ವಿಜಯನಗರ ಜಿಲ್ಲೆ):ಇಲ್ಲಿನ ಸಾಹಿತಿ ಕುಂ.ಬಾ.ಸದಾಶಿವಪ್ಪ (83) ಶನಿವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದರು.ಮೃತರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡಿದ್ದ ಅವರು ಕನ್ನಡದಲ್ಲಿ 55, ಆಂಗ್ಲ ಭಾಷೆಯಲ್ಲಿ 7 ಕೃತಿಗಳನ್ನು ರಚಿಸಿದ್ದಾರೆ. 32 ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ಜೀವನ ಜೋಕಾಲಿ, ಬಳ್ಳಾರಿ ಜಿಲ್ಲೆ ಸಾಂಸ್ಕೃತಿಕ ದರ್ಶನ, ಕರ್ನಾಟಕ ಕುತೂಹಲ, ರಾಯಸಂ ಸಂಸ್ಕೃತಿ, ಕಂ ನಾಡಿಗೆ ಜೈನರ ಕೊಡುಗೆ ಪ್ರಮುಖವಾದವು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾಗಿ, ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ, ಇತಿಹಾಸ ಅಕಾಡೆಮಿ, ಪುಠ್ಯಪುಸ್ತಕ ರಚನಾ ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು. ದಾವಣಗೆರೆ ಜಿಲ್ಲೆ ಐದನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಗೌರವಕ್ಕೆ ಭಾಜನರಾಗಿದ್ದರು. ಮೃತರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಪಟ್ಟಣದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.