ADVERTISEMENT

26ರಂದು ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2022, 7:04 IST
Last Updated 24 ಜೂನ್ 2022, 7:04 IST
   

ಹೊಸಪೇಟೆ (ವಿಜಯನಗರ): 'ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಜೂ. 26ರಂದು ನಗರದ ಚಿತ್ತವಾಡ್ಗಿ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ' ಎಂದು ಸಮಿತಿ ಜಿಲ್ಲಾ ಅಧ್ಯಕ್ಷ ಜಿ. ಶಿವಕುಮಾರ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಉದ್ಘಾಟಿಸುವರು. ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು ಎಂದು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಿ. ಶಿವಶಂಕರ್, ಉಪಾಧ್ಯಕ್ಷ ಆರ್. ಮೋಹನ್ ಪಾಲ್ಗೊಳ್ಳುವರು. ಸಮಿತಿಯ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸುವರು. ಯುಪಿಎಸ್ಸಿ ಪರೀಕ್ಷೆಯಲ್ಲಿ 191ನೇ ರ‍್ಯಾಂಕ್ ಗಳಿಸಿದ ಅಪೂರ್ವ ಬಾಸೂರು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳನ್ನು ಸತ್ಕರಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಸಂವಿಧಾನದ ಬಗ್ಗೆ ಅರಿವು ಮೂಡಿಸಿ ಜನರನ್ನು ಜಾಗೃತಗೊಳಿಸುವುದು, ಐಕ್ಯತೆ, ವೈಚಾರಿಕತೆಯ ಮಹತ್ವ ತಿಳಿಸುವುದು ಸಮಿತಿ ಮುಖ್ಯ ಉದ್ದೇಶವಾಗಿದೆ. ಸಮಿತಿ ಅಸ್ತಿತ್ವಕ್ಕೆ ಬಂದ ನಂತರ ತಿಂಗಳಿಗೊಮ್ಮೆ ಕಾರ್ಯಕ್ರಮ ಏರ್ಪಡಿಸಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಜ್ಜಲ್ ಶಿವಕುಮಾರ್, ಉಪಾಧ್ಯಕ್ಷ ಟಿ. ನಾಗೇಶ್, ಶ್ರೀಧರ್, ಭಾಸ್ಕರ್ ಎಸ್.ಆರ್., ವಿರೂಪಾಕ್ಷ ನಾಯಕ, ಆಂಜನೇಯಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.