ADVERTISEMENT

ನಿವೃತ್ತ ಪ್ರಾಧ್ಯಾಪಕರಿಗೆ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 31 ಮೇ 2021, 14:11 IST
Last Updated 31 ಮೇ 2021, 14:11 IST
ಕೆಲಸದಿಂದ ನಿವೃತ್ತರಾದ ಪ್ರಾಧ್ಯಾಪಕರಿಗೆ ಸೋಮವಾರ ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಪ್ರಾಚಾರ್ಯ ವಿ.ಎಸ್‌. ಪ್ರಭಯ್ಯ ಸತ್ಕರಿಸಿ ಬೀಳ್ಕೊಟ್ಟರು
ಕೆಲಸದಿಂದ ನಿವೃತ್ತರಾದ ಪ್ರಾಧ್ಯಾಪಕರಿಗೆ ಸೋಮವಾರ ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಪ್ರಾಚಾರ್ಯ ವಿ.ಎಸ್‌. ಪ್ರಭಯ್ಯ ಸತ್ಕರಿಸಿ ಬೀಳ್ಕೊಟ್ಟರು   

ಹೊಸಪೇಟೆ (ವಿಜಯನಗರ): ನಗರದ ವಿಜಯನಗರ ಕಾಲೇಜಿನಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಪ್ರಾಧ್ಯಾಪಕರಿಗೆ ಸೋಮವಾರ ಆಡಳಿತ ಮಂಡಳಿಯಿಂದ ಸರಳವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಭೌತಶಾಸ್ತ್ರ ವಿಭಾಗದ ಬಸಣ್ಣ ಡಿಗ್ಗಿ, ಕನ್ನಡ ಭಾಷಾ ವಿಭಾಗದ ಲಕ್ಷ್ಮಣ್ ಎಂ. ಕರಿಭೀಮಣ್ಣನವರ್ ಅವರಿಗೆ ಆಡಳಿತ ಮಂಡಳಿಯ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ ಅವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಪ್ರಾಧ್ಯಾಪಕ ಕಾಯಕವನ್ನು ಅಚ್ಚುಕಟ್ಟಾಗಿ ನೆರವೇರಿಸಿ ಕಾಲೇಜಿಗೂ, ಆಡಳಿತ ಮಂಡಳಿಗೆ ಹೆಸರು ತಂದುಕೊಟ್ಟಿದ್ದಾರೆ. ಇವರ ನಿವೃತ್ತಿ ಜೀವನ ಸುಖಕರವಾಗಿರಲಿ’ ಎಂದು ಹಾರೈಸಿದರು.

ADVERTISEMENT

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಸಣ್ಣ ಡಿಗ್ಗಿ, ಲಕ್ಷ್ಮಣ್ ಎಂ.ಕರಿಭೀಮಣ್ಣನವರ್, ‘ಕಾಲೇಜಿನಲ್ಲಿ ಮುಕ್ತವಾಗಿ ಪಾಠ ಪ್ರವಚನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಸೇವಾ ಅವಧಿಯ ದಿನಗಳಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ಟಿದ್ದರು. ಕೋವಿಡ್19 ನಡುವೆಯೂ ಕಾಲೇಜು ಆಡಳಿತ ಮಂಡಳಿ ನಮಗೆ ಸತ್ಕರಿಸಿ ಬೀಳ್ಕೊಡುತ್ತಿರುವುದು ಖುಷಿಯ ಸಂಗತಿ’ ಎಂದರು.

ಪದವಿ ಕಾಲೇಜು ಪ್ರಾಂಶುಪಾಲ ವಿ.ಎಸ್.ಪ್ರಭಯ್ಯ, ಪ್ರಾಧ್ಯಾಪಕರಾದ ಸುಭಾಷ್.ಟಿ, ಉಮಾಮಹೇಶ್ವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.