ADVERTISEMENT

ಹೊಸಪೇಟೆ– ಬಿಜೆಪಿ ಅಭ್ಯರ್ಥಿ ಪರ ಮತದಾರರಿಗೆ ಹಂಚುತ್ತಿದ್ದ ₹8.26 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 9 ಮೇ 2023, 12:57 IST
Last Updated 9 ಮೇ 2023, 12:57 IST
   

ಹೊಸಪೇಟೆ (ವಿಜಯನಗರ): ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಲ್ಲಾಹುಣ್ಸಿ ರಾಮಣ್ಣ ಪರ ಮತದಾರರಿಗೆ ಹಂಚುತ್ತಿದ್ದ ₹8.26 ಲಕ್ಷ ನಗದು ಹಣವನ್ನು ಎಫ್‌ಎಸ್‌ಟಿ ತಂಡ ಮಂಗಳವಾರ ವಶಪಡಿಸಿಕೊಂಡಿದೆ.

‘ಹಗರಿಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಗೆ ಸೇರಿದ ಕೊಟ್ಟೂರು ತಾಲ್ಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಬಲ್ಲಾಹುಣ್ಸಿ ರಾಮಣ್ಣ ಅವರ ಪರ ಮತದಾರರಿಗೆ ಹಣ ಹಂಚಲಾಗುತ್ತಿತ್ತು. ಎಫ್‌ಎಸ್‌ಟಿ ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿ ಹಣವನ್ನು ವಶಕ್ಕೆ ಪಡೆದಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ವೆಂಕಟೇಶ್‌ ಟಿ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT