ವಿಜಯನಗರ (ಹೊಸಪೇಟೆ): ‘ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಗರದ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಅಪ್ಪಣ್ಣ ತಿಳಿಸಿದರು.
‘ಮಾ.11ರಂದು ಬೆಳಿಗ್ಗೆ ಪಂಚಾಮೃತ, ರುದ್ರಾಭಿಷೇಕ, ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನಡೆಯಲಿದೆ. ಸಂಜೆ 6ಕ್ಕೆ ಸ್ಥಳೀಯ ಕಲಾವಿದರು, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮರುದಿನ ಅನ್ನಸಂತರ್ಪಣೆ ನಡೆಯಲಿದೆ. ಈ ವರ್ಷ ವಿಶೇಷವಾಗಿ ಜ್ಯೋತಿರ್ಲಿಂಗ ಅಭಿಷೇಕ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಭಕ್ತರೇ ಸ್ವಹಸ್ತದಿಂದ ಕ್ಷೀರಾಭಿಷೇಕ ಮಾಡಬಹುದು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.
ದೇವಸ್ಥಾನ ಸಮಿತಿಯ ಚಂದ್ರಕಾಂತ್ ಕಾಮತ್, ವೇದಮೂರ್ತಿ, ಗೋಪಾಲ ಪೈ, ಮಧುಸೂದನ್, ದೇವದಾಸ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.