ಹೊಸಪೇಟೆ (ವಿಜಯನಗರ): ಎರಡನೇ ಶ್ರಾವಣ ಸೋಮವಾರದ ಅಂಗವಾಗಿ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರನಿಗೆ ಸೋಮವಾರ ವಿಶೇಷ ಪೂಜೆ ನೆರವೇರಿಸಲಾಯಿತು.
ಹಂಪಿ ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿರೂಪಾಕ್ಷೇಶ್ವರ ದೇವರಿಗೆ ಅಭಿಷೇಕ ಮಾಡಿ, ಹೂಗಳಿಂದ ಅಲಂಕರಿಸಿ, ಆರತಿ ಮಾಡಿ ವಿಶೇಷವಾಗಿ ಪೂಜೆ ಸಲ್ಲಿಸಿದರು.
ಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ನೆರೆಯ ಕೊಪ್ಪಳ, ದಾವಣಗೆರೆ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಂದ ಭಕ್ತರು ಬಂದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ತುಂತುರು ಮಳೆ ಲೆಕ್ಕಿಸದೇ ಹಂಪಿ ಪರಿಸರದಲ್ಲಿ ಓಡಾಡಿ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ತುಂಗಭದ್ರಾ ನದಿ ಹರಿಯುವ ಸುಂದರ ದೃಶ್ಯ ನೋಡಿ ಪುಳಕಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.