ಹೊಸಪೇಟೆ (ವಿಜಯನಗರ): ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ, ಆಯುಷ್ಯ ವೃದ್ಧಿಸಲು ಪ್ರಾರ್ಥಿಸಿ ನರೇಂದ್ರ ಮೋದಿ ಅಭಿಮಾನಿ ಬಳಗದವರು ಸೋಮವಾರ ಹಂಪಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಹಂಪಿಯ ಪಂಪ ವಿರೂಪಾಕ್ಷೇಶ್ವರನಿಗೆ ಮೋದಿ ಅವರ ಹೆಸರಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ ಸಲ್ಲಿಸಿದರು.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಲೋಪವಾಗಿತ್ತು. ಅಂತಹ ಘಟನೆಗಳು ಮರುಕಳಿಸಬಾರದು. ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು ಎಂದು ಪ್ರಾರ್ಥಿಸಿದರು.
ಬಳಗದ ವಿರೂಪಾಕ್ಷಿ ವಿ. ಹಂಪಿ, ಜಿ ಮಂಜುನಾಥ್ ಗೌಡ, ವಿ ಗೋಪಾಲ್, ಎಚ್ ಹುಲಗಪ್ಪ, ಎಚ್ ಶಿವಕುಮಾರ್, ಎಸ್ ದೇವರಾಜ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.