ಹೊಸಪೇಟೆ (ವಿಜಯನಗರ): ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನಡೆಸಿದ 2020–21ನೇ ಸಾಲಿನ ಸ್ನಾತಕೋತ್ತರ ಪದವಿಯ ವಿವಿಧ ವಿಭಾಗಗಳಲ್ಲಿ ನಗರದ ವಿಜಯನಗರ ಕಾಲೇಜಿನ ಮೂವರು ವಿದ್ಯಾರ್ಥಿಗಳು ರ್ಯಾಂಕ್ ಗಳಿಸಿದ್ದಾರೆ.
ಎಂ.ಎ. ಆಂಗ್ಲ ಭಾಷೆಯಲ್ಲಿ ಚಲ್ಸಿ ಚೋಪ್ರಾ ಪ್ರಥಮ, ಎಂಎಸ್ಸಿ ಗಣಕ ವಿಜ್ಞಾನದಲ್ಲಿ ಮಹಾಲಕ್ಷ್ಮಿ ಎರಡನೇ ಹಾಗೂ ಎಂ.ಎ. ಅರ್ಥಶಾಸ್ತ್ರದಲ್ಲಿ ಶಾಮುಕ್ತ ಸೋನಿಯಾ ಎಸ್. ತೃತೀಯ ರ್ಯಾಂಕ್ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುರುಸಿದ್ದಸ್ವಾಮಿ, ಉಪಾಧ್ಯಕ್ಷ ಅಲ್ಲಂ ಚೆನ್ನಪ್ಪ, ಕಾರ್ಯದರ್ಶಿ ಬಿ.ವಿ. ಬಸವರಾಜ, ಸಹಕಾರ್ಯದರ್ಶಿ ಶಾಂತವೀರನಗೌಡ, ಖಜಾಂಚಿ ಗೋನಾಳು ರಾಜಶೇಖರಗೌಡ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಸುಂಡಿ ನಾಗರಾಜಗೌಡ, ಪ್ರಾಚಾರ್ಯ ವಿ.ಎಸ್. ಪ್ರಭಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.