ADVERTISEMENT

ಹೊಸಪೇಟೆ: ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 9 ಮೇ 2023, 13:03 IST
Last Updated 9 ಮೇ 2023, 13:03 IST
ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದ ಎಚ್‌ಪಿಎಸ್‌ ಕಾಲೇಜಿನ ಮಸ್ಟರಿಂಗ್‌ ಕೇಂದ್ರದಲ್ಲಿ ಹಾಕಿದ್ದ ಶಾಮಿಯಾನ ಬಿರುಗಾಳಿ ಮಳೆಗೆ ಮಂಗಳವಾರ ನೆನೆದು ಬಾಗಿಕೊಂಡಿತು. ಆದರೆ, ಅಷ್ಟರಲ್ಲಾಗಲೇ ಚುನಾವಣಾ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದ್ದರು
ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದ ಎಚ್‌ಪಿಎಸ್‌ ಕಾಲೇಜಿನ ಮಸ್ಟರಿಂಗ್‌ ಕೇಂದ್ರದಲ್ಲಿ ಹಾಕಿದ್ದ ಶಾಮಿಯಾನ ಬಿರುಗಾಳಿ ಮಳೆಗೆ ಮಂಗಳವಾರ ನೆನೆದು ಬಾಗಿಕೊಂಡಿತು. ಆದರೆ, ಅಷ್ಟರಲ್ಲಾಗಲೇ ಚುನಾವಣಾ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದ್ದರು   

ಹೊಸಪೇಟೆ (ವಿಜಯನಗರ): ಜಿಲ್ಲೆಯ ಹೊಸಪೇಟೆ, ಹರಪನಹಳ್ಳಿ, ಕೊಟ್ಟೂರು ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ.

ಮಳೆಗೆ ಹರಪನಹಳ್ಳಿ ಪಟ್ಟಣದ ಎಚ್‌ಪಿಎಸ್‌ ಕಾಲೇಜಿನ ಮಸ್ಟರಿಂಗ್‌ ಕೇಂದ್ರದಲ್ಲಿ ಹಾಕಿದ್ದ ಶಾಮಿಯಾನ ತೋಯ್ದು ನೀರು ಜಿನುಗುತ್ತಿತ್ತು. ಆದರೆ, ಅಷ್ಟರಲ್ಲಾಗಲೇ ಮತಗಟ್ಟೆ ಸಿಬ್ಬಂದಿ ಅಲ್ಲಿಂದ ನಿರ್ಗಮಿಸಿದ್ದರು. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ, ಕುರುಗೋಡಿನ ಕೆಲವು ಭಾಗಗಳಲ್ಲಿ ಮಳೆಯಾಗಿರುವುದು ವರದಿಯಾಗಿದೆ. ಮಂಗಳವಾರ ದಿನವಿಡೀ ಕೆಂಡದಂತಹ ಬಿಸಿಲು, ಸೆಕೆ ಇತ್ತು. ಮಳೆಯಾಗಿದ್ದರಿಂದ ವಾತಾವರಣ ತಂಪಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT