ಹೊಸಪೇಟೆ (ವಿಜಯನಗರ): ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಒಂದು ತಿಂಗಳು ಹಮ್ಮಿಕೊಂಡಿರುವ ಯೋಗ ಉತ್ಸವ ಕಾರ್ಯಕ್ರಮ ವಿಶ್ವಪ್ರಸಿದ್ಧ ಹಂಪಿಯಲ್ಲಿ ಭಾನುವಾರ ಬೆಳಿಗ್ಗೆ ನಡೆಯಿತು.
ಇದೇ ವೇಳೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ‘ನಾನು ಯೋಗ ಮಾಡುವುದಿಲ್ಲ. ನಾನು ದೊಡ್ಡ ಸೋಂಬೇರಿ. ಅದರ ಬಗ್ಗೆ ನಾನು ಮಾತನಾಡುವುದು ಸೂಕ್ತವಲ್ಲ. ಆದರೆ, ಬೇರೆಯವರು ಯೋಗ ಮಾಡುವುದು ನೋಡಿದರೆ ಸ್ಫೂರ್ತಿ ಬರುತ್ತದೆ. ಬರುವ ದಿನಗಳಲ್ಲಿ ಯೋಗ ಮಾಡಲು ಪ್ರಯತ್ನಿಸುತ್ತೇನೆ. ಆರೋಗ್ಯವೇ ಭಾಗ್ಯ. ಯುವಕರು ಆರೋಗ್ಯವಾಗಿದ್ದರೆ ದೇಶದ ಭವಿಷ್ಯ ಉಜ್ವಲವಾಗಿರಲು ಸಾಧ್ಯ’ ಎಂದು ತಿಳಿಸಿದರು.
ಇಡೀ ದೇಶಕ್ಕೆ ರಾಮದೇವ್, ಕರ್ನಾಟಕಕ್ಕೆ ವಚನಾನಂದ ಸ್ವಾಮೀಜಿಗಳು ಯೋಗ ಗುರು. ಇಲ್ಲಿ ಇಷ್ಟೊಂದು ಜನ ಸೇರಿದ್ದಾರೆ ಎಂದರೆ ಅವರ ಶಕ್ತಿ ಏನೆಂಬುದು ಗೊತ್ತಾಗುತ್ತದೆ ಎಂದು ಹೇಳಿದರು.
ಶ್ವಾಸ ಯೋಗ ಸಂಸ್ಥೆ, ಪತಂಜಲಿ ಯೋಗ ಸಂಸ್ಥೆ, ಕೇಂದ್ರ ಸರ್ಕಾರದ ಮೊರಾರ್ಜಿ ದೇಸಾಯಿ ಯೋಗ ವಿಜ್ಞಾನ ಸಂಸ್ಥೆ ಹಾಗೂ ಆಯುಷ್ ಇಲಾಖೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಯೋಗ ಹೇಳಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.