ADVERTISEMENT

ತುಂಗಭದ್ರಾ ಅಣೆಕಟ್ಟೆಯಲ್ಲಿ 73 ವರ್ಷಗಳ ಬಳಿಕ ಮಹತ್ವದ ಸುರಕ್ಷತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 11:49 IST
Last Updated 17 ಡಿಸೆಂಬರ್ 2025, 11:49 IST

ತುಂಗಭದ್ರಾ ಡ್ಯಾಂ ರಾಜ್ಯದ ಎರಡನೇ ಅತಿದೊಡ್ಡ ಜಲಾಶಯ. ಸದ್ಯ, ಈ ಜಲಾಶಯಕ್ಕೆ ಹೊಸ ಗೇಟ್‌ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ. 52 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾರ್ಯ ನಡೆಯುತ್ತಿದೆ. ಮೂರು ರಾಜ್ಯಗಳ 15 ಲಕ್ಷ ಎಕರೆ ಕೃಷಿ ಜಮೀನಿಗೆ ನೀರುಣಿಸುವ ಜಲಾಶಯವಿದು. ಹಳೆಯ ಗೇಟ್‌ ಕಳಚಿ ತೆಗೆಯುವ ಮತ್ತು ಅಲ್ಲಿಗೆ ಹೊಸ ಗೇಟ್‌ ಅಳವಡಿಸುವ ಕಾರ್ಯ ಈಗ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.