ADVERTISEMENT

ವಿಜಯನಗರ: ಎರಡು ಚಿರತೆ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 8:55 IST
Last Updated 17 ಏಪ್ರಿಲ್ 2021, 8:55 IST

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಸಮೀಪದ ಪವರ್‌ ಹೌಸ್‌ (ಎಚ್‌ಪಿಸಿ) ಸಮೀಪ ಶುಕ್ರವಾರ ಎರಡು ಚಿರತೆಗಳು ಪ್ರತ್ಯಕ್ಷವಾಗಿವೆ.

ಫೋರ್‌ ಬೇ ಕೆನಾಲ್‌ಗೆ ಹೋಗುವ ಮಾರ್ಗ ಮಧ್ಯದಲ್ಲಿ ಎರಡು ಚಿರತೆಗಳು ಶುಕ್ರವಾರ ಬೆಳಗಿನ ಜಾವ ಪ್ರತ್ಯಕ್ಷವಾಗಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮಸ್ಥರು ಚಿರತೆಗಳು ಓಡಾಡುವ ದೃಶ್ಯ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದು ಜನರಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ. ಇದೇ ಭಾಗದಲ್ಲಿ ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆಯವರು ಬೋನು ಇರಿಸಿ ಚಿರತೆಯೊಂದನ್ನು ಸೆರೆ ಹಿಡಿದಿದ್ದರು.

ಗುಡ್ಡಕ್ಕೆ ಬೆಂಕಿ:ಸಂಡೂರು ರಸ್ತೆಯ ಕಾಯ್ದಿಟ್ಟ ಅರಣ್ಯ ಪ್ರದೇಶದ ಅಂಜಿನಮ್ಮನ ಬಗಡಿ ಗುಡ್ಡದಲ್ಲಿ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಅಪಾರ ಗಿಡ, ಮರಗಳು ಸುಟ್ಟು ಕರಕಲಾಗಿವೆ. ‘ಗುಡ್ಡದಲ್ಲಿ ಹುಲ್ಲು, ಗಿಡ, ಮರಗಳು ಒಣಗಿ ಹೋಗಿವೆ. ಕೆಂಡದಂತಹ ಬಿಸಿಲಿಗೆ ಬೆಂಕಿ ಹೊತ್ತಿಕೊಂಡಿರಬಹುದು. ವಿಷಯ ತಿಳಿದು, ಬೆಂಕಿ ಬೇರೆಡೆ ವ್ಯಾಪಿಸಿಕೊಳ್ಳದಂತೆ ತಡೆಯಲಾಗಿದೆ’ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.