ಹೊಸಪೇಟೆ (ವಿಜಯನಗರ): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಹಿತಿ ಕಲಾವಿದರಿಗೆ ಮಾಸಾಶನ ಮಂಜೂರಾತಿ ಆಯ್ಕೆ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿದ್ದು, ಅದರಲ್ಲಿ ನಗರದ ಹಿರಿಯ ಗಿಟಾರ್ ಕಲಾವಿದ ವಿ.ಡಿ.ವೆಂಕನಗೌಡ ಸ್ಥಾನ ಪಡೆದಿದ್ದಾರೆ.
ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಈ ಸಮಿತಿ ರಚಿಸಿದೆ. ಯಾವುದೇ ಕಲಾ ಪ್ರಕಾರಕ್ಕೆ ಸೇರಿದ ಹಿರಿಯ ಕಲಾವಿದರು ಮಾಸಾಶನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 9880527743 ಸಂಪರ್ಕಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.